ಸುಬ್ರಹ್ಮಣ್ಯ ಪ್ರಾರ್ಥಮಿಕ ಅರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರನ್ನು ನೇಮಿಸುತ್ತೇವೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.

ಸುಬ್ರಹ್ಮಣ್ಯ :ಮೇ 16.ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ, ಪರಿಶೀಲನೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಪುತ್ತೂರು  ಉಪವಿಭಾಗ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಸಾರ್ವಜನಿಕರ ಹಾಗೂ ಮಾಧ್ಯಮದವರ ಮನವಿಗೆ ಸುಬ್ರಹ್ಮಣ್ಯ ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.

ಜಿಲ್ಲಾಧಿಕಾರಿ ಗಳು ಭೇಟಿ ಸಂದರ್ಭದಲ್ಲಿ ಆಸ್ಪತ್ರೆ ಕೆಲಸದ ಅವಧಿ ಮುಗಿದು ಬಾಗಿಲು ಮುಚ್ಚಿತ್ತು.

ಮಾಜೀ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯಿತ್ ಉಪಾಧ್ಯಕ್ಷ ವೆಂಕಟೇಶ್ ಹೆಚ್. ಎಲ್ ಹಾಗೂ ಮಾದ್ಯಮದವರು  ಕುಕ್ಕೆ ಸುಬ್ರಹ್ಮಣ್ಯಕ್ಕೆ ವೈದ್ಯರ ಅಗತ್ಯವಿದೆ,ರಾತ್ರಿ ಹಗಲು ಎಲ್ಲಾ ಸಮಯದಲ್ಲೂ ಆಸ್ಪತ್ರೆ ತೆರೆದಿರಬೇಕು ವೈದ್ಯರು ಹಾಗೂ ಸಿಬ್ಬಂದಿಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ಹೆಚ್ಚುವರಿ ವೈದ್ಯರನ್ನು, ಸಿಬಂಧಿಗಳನ್ನು ನೇಮಿಸುತ್ತೇವೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭರವಸೆ ನೀಡಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ

ಸುಳ್ಯ ತಹಶಿಲ್ದಾರ್ ಮಂಜುನಾಥ ಜಿ., ಕಡಬ ತಹಶಿಲ್ದಾರ್ ಪ್ರಭಾಕರ ಕಜೂರೆ, ಕಡಬ ಕಂದಾಯ ನಿರೀಕ್ಷಕ ಪೃಥ್ವಿಕುಮಾರ್, ಕಡಬ ಉಪ ತಹಶಿಲ್ದಾರ್ ಮನೋಹರ್ ಕೆ.ಟಿ, ಸುಬ್ರಹ್ಮಣ್ಯ ಗ್ರಾ.ಪಂ. ಕಾರ್ಯದರ್ಶಿ ಮೋನಪ್ಪ  ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು