ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತಿ ವಸಂತ ದ್ವಾದಶಿ ಉತ್ಸವ

ಸುಬ್ರಹ್ಮಣ್ಯ :ಮೇ,20.ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಸುಬ್ರಹ್ಮಣ್ಯ ಶ್ರೀ ನರಸಿಂಹ ಜಯಂತಿ ಮಹೋತ್ಸವ ಅಂಗವಾಗಿ ಶ್ರೀ ಮದಾನಂದತೀರ್ಥ ತತ್ವದರ್ಶಿನೀ ಸಭಾ ಸಾಂಸ್ಕೃತಿಕ ಕಾರ್ಯಕ್ರಮ ಸಂದರ್ಭದಲ್ಲಿ

23/24ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ ಹಾಗೂ ಪಿ. ಯು. ಸಿ  ಪರೀಕ್ಷೆಯಲ್ಲಿ  ಗರಿಷ್ಠ ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರಿಂದ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ ವಿದ್ಯಾರ್ಥಿ ನಿಜೇಶ್ 582 ಅಂಕಗಳು -93.12%,

ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ವರ್ಷ ಬೇಕಲ 619ಅಂಕಗಳು -99.04%,

ಎಸ್. ಎಸ್. ಪಿ. ಯು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ನಮ್ರತಾ 581ಅಂಕಗಳು -92.96%,

 

ಕುಮಾರಸ್ವಾಮಿ ವಿದ್ಯಾಲಯದ  ಪಿ. ಯು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ. ಎಸ್.594ಅಂಕಗಳು -99%

ಈ ವಿಶೇಷ ಪ್ರತಿಭೆಗಳನ್ನು ಗುರುತಿಸಿ  ಸನ್ಮಾನ ಕಾರ್ಯ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಒಳ್ಳೆಯ ಪರಿಶ್ರಮಪಟ್ಟು ವಿದ್ಯಾರ್ಜನೆ ಮಾಡಿದ್ದಾರೆ.

ಮಕ್ಕಳ ಮುಂದಿನ ಉನ್ನತ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ಬರಲಿ ಎಂದು ಆಶೀರ್ವದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ :

ಶ್ರೀ ಮದಾನಂದತೀರ್ಥ ತತ್ವದರ್ಶಿನೀ ಸಭಾ ವೇದಿಕೆಯಲ್ಲಿ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ )ಪುತ್ತೂರು ಪ್ರಸ್ತುತಪಡಿಸುವ, ನೃತ್ಯ ಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶಸಿರುವ ನೃತ್ಯೋಹಂ ಎಂಬ ಭರತನಾಟ್ಯ ಕಾರ್ಯಕ್ರಮವನ್ನು ನೃತ್ಯ ವಿದ್ಯಾರ್ಥಿಗಳು ನಡೆಸಿಕೊಟ್ಟರು.

 

0 ಕಾಮೆಂಟ್‌ಗಳು