ಬೆಂಗಳೂರು :ಜು,3,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಾಧಿಕಾರಿಗಳಿಗೆ ನೀಡುವ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿಯವರಿಗೆ ಲಭಿಸಿದೆ.ಎಂದು ಮಾಹಿತಿ ಲಭ್ಯವಾಗಿದೆ.
ಶ್ರೀಯುತ ಡಾಕ್ಟಾರ್ ತ್ರಿಮೂರ್ತಿ ಅವರು ಕಡಬ ಸಮುದಾಯ ಅರೋಗ್ಯ ಕೇಂದ್ರದಲ್ಲಿ 16 ವರ್ಷ ಗಳ ಕಾಲ ಆಡಳಿತ ವೈದ್ಯಧಿಕಾರಿ ಆಗಿದ್ದರು.8 ವರ್ಷ ದಿಂದ ಸುಬ್ರಹ್ಮಣ್ಯ ಪ್ರಾರ್ಥಮಿಕ ಅರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಜನಸಾಮಾನ್ಯರ ಸೇವೆ ಮಾಡಿಕೊಂಡು ಬಂದಿದ್ದಾರೆ,ಸದ್ಯ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಭಾರ ಮುಖ್ಯ ವೈದ್ಯಾಧಿಕಾರಿಯಾಗಿ ಹಾಗೂ ಸುಬ್ರಹ್ಮಣ್ಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸೌಮ್ಯ ಸ್ವಭಾವದ ಎಲ್ಲರಿಗೂ ಅಚ್ಚುಮೆಚ್ಚಿನ ಡಾಕ್ಟರ್ ಎಂದು ಸಾರ್ವಜನಿಕ ವಲಯದಲ್ಲಿ ಹೆಸರುವಾಸಿಯಾದಂತ ಡಾಕ್ಟಾರ್ ತ್ರಿಮೂರ್ತಿ ಅವರಿಗೆ
ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
0 ಕಾಮೆಂಟ್ಗಳು