ಅಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ದಾಳಿ 5 ದೋಣಿಗಳನ್ನು ವಶಕ್ಕೆ ಪಡೆದ ಗಣಿ ಇಲಾಖೆ...!

ನ್ಯೂಸ್ ಡೆಸ್ಕ್ : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್‍ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಉಪತಿತರಿದ್ದರು.

0 ಕಾಮೆಂಟ್‌ಗಳು