ಲಾರಿ ಚಾಲಕ ಸುಜಿತ್, ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ಅಕ್ಕಿ ಲೋಡ್ ನ ಲಾರಿ ಬಂಟ್ವಾಳದ ಎಸ್ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.
ಲಾರಿಯ ಹಿಂಭಾಗದಲ್ಲಿ ಅಕ್ಕಿ ಲೋಡ್ ಮೇಲೆ ಕುಳಿತುಕೊಂಡಿದ್ದ ಕಾರ್ಮಿಕ ಲಾರಿ ಪಲ್ಟಿಯಾದ ವೇಳೆ ರಸ್ತೆಗೆ ಎಸೆಯಲ್ಟಟ್ಟು ಮೃತಪಟ್ಟಿದ್ದಾನೆ.ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ. ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 ಕಾಮೆಂಟ್ಗಳು